ADVERTISEMENT

ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಏಜೆನ್ಸೀಸ್
Published 21 ಅಕ್ಟೋಬರ್ 2017, 9:38 IST
Last Updated 21 ಅಕ್ಟೋಬರ್ 2017, 9:38 IST
ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ
ಉತ್ತರಪ್ರದೇಶ: ದುಷ್ಕರ್ಮಿಗಳಿಂದ ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ   

ಉತ್ತರಪ್ರದೇಶ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಹಾಗೂ ಸ್ಥಳೀಯ ಪತ್ರಕರ್ತ ರಾಜೇಶ್‌ ಮಿಶ್ರಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಶನಿವಾರ ಉತ್ತರ ಪ್ರದೇಶದ ಘಾಜಿಪುರ ಜಿಲ್ಲೆಯ ಕರಾಂದ ಪ್ರದೇಶದಲ್ಲಿ ನಡೆದಿದೆ.

ರಾಜೇಶ್‌ ಕರಾಂದ ಪಟ್ಟಣದಲ್ಲಿ ಸಣ್ಣ ಅಂಗಡಿಯನ್ನು ಹೊಂದಿದ್ದು, ಎಂದಿನಂತೆ ಸಹೋದರನೊಂದಿಗೆ ಅಂಗಡಿಗೆ ತೆರಳಿದ್ದರು. ಈ ವೇಳೆ ಬೈಕ್‌ನಲ್ಲಿ ಮುಖ ಮುಚ್ಚಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು ರಾಜೇಶ್‌ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಕ್ಕದಲ್ಲಿದ ರಾಜೇಶ್‌ ಸಹೋದರ ಕೂಡ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜೇಶ್‌ ಈ ಪ್ರದೇಶದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಲ್ಲಿ ಸಕ್ರಿಯರಾಗಿದರು ಎನ್ನಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT