ADVERTISEMENT

ಉತ್ತರ ಪ್ರದೇಶ: ದೂಳಿನ ಬಿರುಗಾಳಿಗೆ 17 ಸಾವು

ಪಿಟಿಐ
Published 2 ಜೂನ್ 2018, 19:30 IST
Last Updated 2 ಜೂನ್ 2018, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಲಖನೌ: ಉತ್ತರ ಪ್ರದೇಶದ ವಿವಿಧ ಕಡೆಗಳಲ್ಲಿ ದೂಳಿನ ಬಿರುಗಾಳಿಗೆ 17 ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿದ್ದಾರೆ.

ಮೊರಾದಾಬಾದ್‌ನಲ್ಲಿ ಏಳು ಜನ ಸಾವನ್ನಪ್ಪಿದ್ದಾರೆ. ಸಾಂಭಾಲ್‌ನಲ್ಲಿ ಮೂವರು, ಬದೌನ್‌, ಮುಜಾಪ್ಫರ್‌ ನಗರ, ಮೀರಠ್‌ನಲ್ಲಿ ತಲಾ ಇಬ್ಬರು ಮೃತಪಟ್ಟಿದ್ದಾರೆ.

ಮರಗಳು ಉರುಳಿದ್ದರಿಂದ ಮತ್ತು ಮನೆ ಕುಸಿತದಿಂದಲೇ ಹೆಚ್ಚಿನವರು ಮೃತಪಟ್ಟಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರದ ವಕ್ತಾರ ತಿಳಿಸಿದ್ದಾರೆ.

ADVERTISEMENT

24 ಗಂಟೆ ಒಳಗೆ ಸಂತ್ರಸ್ತರಿಗೆ ಪರಿಹಾರ ನೀಡಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ನಿರ್ದೇಶನ ನೀಡಿದೆ. ಉತ್ತರ ಪ್ರದೇಶದಲ್ಲಿ ಕಳೆದ ತಿಂಗಳಿನಿಂದ ದೂಳಿನ ಬಿರುಗಾಳಿಗೆ ಸುಮಾರು 130 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.