ADVERTISEMENT

ಉಪವಾಸ ಅಂತ್ಯ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2013, 19:59 IST
Last Updated 7 ಏಪ್ರಿಲ್ 2013, 19:59 IST

ಹೈದರಾಬಾದ್ (ಪಿಟಿಐ): ವಿದ್ಯುತ್ ದರ ಹೆಚ್ಚಳವನ್ನು ವಿರೋಧಿಸಿ ಅನಿರ್ದಿಷ್ಟಾವಧಿಯ ಉಪವಾಸ ಕೈಗೊಂಡಿದ್ದ ವೈಎಸ್‌ಆರ್ ಕಾಂಗ್ರೆಸ್ ನಾಯಕರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಳೆದ ಐದು ದಿನಗಳಿಂದ ಉಪವಾಸ ಮಾಡುತ್ತಿರುವ ವೈಎಸ್‌ಆರ್ ಕಾಂಗ್ರೆಸ್ ಗೌರವ ಅಧ್ಯಕ್ಷೆ ಎಸ್. ವಿಜಯಮ್ಮ ಸೇರಿದಂತೆ ಉಳಿದ ಮುಖಂಡರನ್ನು ರಾತ್ರಿ ಆಸ್ಪತ್ರೆಗೆ ದಾಖಲಿಸಿದಾಗ ಅವರು ತಮ್ಮ ಉಪವಾಸವನ್ನು ಆಸ್ಪತ್ರೆಯಲ್ಲೇ ಅಂತ್ಯಗೊಳಿಸಿದರು ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.