ADVERTISEMENT

ಉಪವಾಸ: ರಾಜ್ಯದ ರೈತ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST

ನವದೆಹಲಿ: ಇಲ್ಲಿನ ರಾಮಲೀಲಾ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರಿಗೆ ಬೆಂಬಲ ನೀಡಿ ಉಪವಾಸ ಕುಳಿತಿರುವ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಮರತೂರು ಗ್ರಾಮದ ರೈತ ಅಜಯ್‌ಕುಮಾರ್‌ ಪಾಟೀಲ ಸೋಮವಾರ ತೀವ್ರ ಅಸ್ವಸ್ಥರಾದರು.

ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ ನಂತರ ಚೇತರಿಸಿಕೊಂಡಿದ್ದು, ಸಂಜೆ ಮತ್ತೆ ಉಪವಾಸ ಸ್ಥಳಕ್ಕೆ ಬಂದು ಸತ್ಯಾಗ್ರಹ ಮುಂದುವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT