ADVERTISEMENT

ಎಎಪಿ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ಭಗವಂತ್ ಮಾನ್ ರಾಜೀನಾಮೆ

ಏಜೆನ್ಸೀಸ್
Published 16 ಮಾರ್ಚ್ 2018, 7:49 IST
Last Updated 16 ಮಾರ್ಚ್ 2018, 7:49 IST
ಭಗವಂತ್ ಮಾನ್ (ಸಂಗ್ರಹ ಚಿತ್ರ)
ಭಗವಂತ್ ಮಾನ್ (ಸಂಗ್ರಹ ಚಿತ್ರ)   

ಚಂಡೀಗಡ: ಪಂಜಾಬ್‌ನ ಮಾಜಿ ಸಚಿವ ಬಿಕ್ರಂ ಸಿಂಗ್‌ ಮಜಿತಿಯಾ ಬಳಿ ದೆಹಲಿ ಮುಖ್ಯಮಂತ್ರಿ, ಎಎಪಿ ವರಿಷ್ಠ ಅರವಿಂದ ಕೇಜ್ರಿವಾಲ್ ಕ್ಷಮೆ ಕೇಳಿದ ಬೆನ್ನಲೇ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸಂಸದರಾದ ಭಗವಂತ್ ಮಾನ್ ರಾಜೀನಾಮೆ ನೀಡಿದ್ದಾರೆ.

ಕೇಜ್ರಿವಾಲ್ ಅವರು ಸಚಿವರ ಬಳಿ ಕ್ಷಮೆ ಕೇಳಿರುವುದರಿಂದ ಅಸಮಾಧಾನಗೊಂಡು ಮಾನ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.

‘ಎಎಪಿಯ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಆದರೆ ಆಮ್ ಆದ್ಮಿಯಾಗಿ ಮುಂದುವರಿಯಲಿದ್ದು, ಮಾದಕವಸ್ತು ದಂಧೆ ಮತ್ತು ಎಲ್ಲ ರೀತಿಯ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರಿಸಲಿದ್ದೇನೆ’ ಎಂದು ಮಾನ್ ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.