ನವದೆಹಲಿ (ಪಿಟಿಐ): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಲ್ಲಿನ ಜಂತರ್ ಮಂತರ್ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದ ಆಮ್ ಆದ್ಮಿ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಎರಚಿದ ಘಟನೆ ಶನಿವಾರ ನಡೆಯಿತು.
ಎಎಪಿಯ ಟೊಪ್ಪಿ ಮತ್ತು ಲಾಂಛನ ಧರಿಸಿ, ಭಾರತ ಮಾತೆಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಿದ್ದ ಯುವಕ ಈ ಕೃತ್ಯ ಎಸಗಿದ್ದಾನೆ. ಆತನನ್ನು ದೆಹಲಿಯ ಶಾಲಿಮಾರ್ ಬಾಗ್ನ ಸಾಗರ್ ಭಂಡಾರಿ (28) ಎಂದು ಗುರತಿಸಲಾಗಿದ್ದು, ತಾನೊಬ್ಬ ಅತೃಪ್ತ ಎಎಪಿ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆ.
ಘಟನೆಯಿಂದ ರೊಚ್ಚಿಗೆದ್ದ ಪಕ್ಷದ ಕಾರ್ಯಕರ್ತರು ಸಾಗರ್ ಭಂಡಾರಿಯನ್ನು ಹಿಗ್ಗಾಮುಗ್ಗಾ ಥಳಿಸಿದರು. ನಂತರ ಸಂಸತ್ ಸ್ಟ್ರೀಟ್ ಠಾಣೆ ಪೊಲೀಸರು ಕರೆದೊಯ್ದುರು. ತೀವ್ರ ಅಸ್ವಸ್ಥಗೊಂಡಿದ್ದ ಆತನನ್ನು ಪೊಲೀಸರು ಚಿಕಿತ್ಸೆಗಾಗಿ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದರು.
‘ಆ ವ್ಯಕ್ತಿ ಯಾರೆಂದು ನನಗೆ ಗೊತ್ತಿಲ್ಲ. ದಾಳಿಗೆ ಒಳಗಾದ ವೇಳೆ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದೆ. ಈ ಸಲ ಅವನು ಹಿಂದಿನಿಂದ ಬಂದು ದಾಳಿ ನಡೆಸಿದ್ದಾನೆ. ಮುಂದಿನ ದಿಗಳಲ್ಲಿ ನೇರವಾಗಿ ದಾಳಿ ನಡೆಸಬಹುದು’ ಎಂದು ಯಾದವ್ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.