ಚೆನ್ನೈ:ತಮಿಳುನಾಡಿನಲ್ಲಿ ಸೋಮವಾರ ಎರಡು ಪ್ರತ್ಯೇಕ ಅಪಘಾತಗಳಲ್ಲಿ 16 ಜನ ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ. ಬೆಂಗಳೂರು ಮೂಲದ ಸ್ಲೀಪರ್ ಕೋಚ್ ಬಸ್ ಕೂಡ ಸೇರಿದೆ ಎಂದು ಪೊಲೀಸರು ಹೇಳಿದ್ದಾರೆ.
ಸೋಮವಾರ ನಸುಕಿನಲ್ಲಿ ಕೊಯಮತ್ತೂರು ಬೈಪಾಸ್ ರಸ್ತೆಯಲ್ಲಿ ಕೇರಳ ಮೂಲದ ಲಾರಿಯೊಂದು ಎದುರಿನಿಂದ ಬರುತ್ತಿದ್ದ ಕೊಟ್ಟಾಯಂ- ಬೆಂಗಳೂರು ಬಸ್ಸಿಗೆ ಡಿಕ್ಕಿ ಹೊಡೆಯಿತು. ಈ ಸಂದರ್ಭದಲ್ಲಿ ಬಸ್ಸಿನ ಡೀಸೆಲ್ ಟ್ಯಾಂಕ್ ಸ್ಫೋಟಿಸಿ ಬೆಂಕಿ ಹೊತ್ತಿಕೊಂಡಿತು.
ಬೆಂಕಿಯ ಜ್ವಾಲೆ ಲಾರಿಯನ್ನೂ ಸುತ್ತುವರಿದು ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಸ್ಸಿನಲ್ಲಿದ್ದ 45 ಜನರ ಪೈಕಿ 17 ಮಂದಿ ಗಾಯಗೊಂಡರು ಎಂದು ಮೂಲಗಳು ಹೇಳಿವೆ. ಮತ್ತೊಂದು ಪ್ರಕರಣದಲ್ಲಿ ಮನಪರೈನಲ್ಲಿ ಸರ್ಕಾರಿ ಮತ್ತು ಖಾಸಗಿ ಬಸ್ ಡಿಕ್ಕಿ ಹೊಡೆದು ಕನಿಷ್ಠ 14 ಮಂದಿ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.