ನವದೆಹಲಿ: ಚಿತ್ರ ಮಂದಿರಗಳಲ್ಲಿ ಸಿನಿಮಾ ಪ್ರದರ್ಶನಕ್ಕೂ ಮುನ್ನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸುವುದಕ್ಕೆ ನಟ ಕಮಲಹಾಸನ್ ಅಸಮಾಧಾನ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಸಿಂಗಪುರದ ಉದಾಹರಣೆ ನೀಡಿದ್ದಾರೆ. ‘ಸಿಂಗಪುರದಲ್ಲಿ ಪ್ರತಿ ಮಧ್ಯರಾತ್ರಿ ರಾಷ್ಟ್ರಗೀತೆ ಪ್ರಸಾರ ಮಾಡಲಾಗುತ್ತದೆ. ಅದೇ ರೀತಿ ದೂರದರ್ಶನ ವಾಹಿನಿಯಲ್ಲಿ ರಾಷ್ಟ್ರಗೀತೆ ಪ್ರಸಾರ ಮಾಡಬಹುದು. ವಿವಿಧ ಸ್ಥಳಗಳಲ್ಲಿ ದೇಶಭಕ್ತಿಯನ್ನು ಪರೀಕ್ಷಿಸಬೇಡಿ ಅಥವಾ ಹೇರಬೇಡಿ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.