ADVERTISEMENT

ಎಸ್‌ಪಿ ಸೇರಿದ ಬಿಜೆಪಿ ಮುಖಂಡ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 19:30 IST
Last Updated 17 ಮಾರ್ಚ್ 2018, 19:30 IST

ಲಖನೌ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸಂಪುಟದ ಹಿರಿಯ ಸದಸ್ಯ ಸ್ವಾಮಿ ಪ್ರಸಾದ್‌ ಮೌರ್ಯ ಅವರ ಅಳಿಯ ಹಾಗೂ ಬಿಜೆಪಿಯ ಹಿಂದುಳಿದ ವರ್ಗಗಳ ಮುಖಂಡ ನವಲ್‌ ಕಿಶೋರ್‌ ಶನಿವಾರ ಸಮಾಜವಾದಿ ಪಕ್ಷ ಸೇರಿದ್ದಾರೆ.

ಗೋರಖಪುರ ಮತ್ತು ಫೂಲ್‌ಪುರ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಹೀನಾಯ ಸೋಲಿನ ಬೆನಲ್ಲೇ ಈ ಪಕ್ಷಾಂತರ ನಡೆದಿದೆ.

ಸಮಾಜವಾದಿ ಪಕ್ಷದ ಮುಖಂಡರಾದ ಅಖಿಲೇಶ್ ಯಾದವ್‌ ಮತ್ತು ಅಜಂ ಖಾನ್‌ ಅವರು ನವಲ್‌ ಕಿಶೋರ್‌ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.