ADVERTISEMENT

ಏರ್‌ಸೆಲ್‌–ಮ್ಯಾಕ್ಸಿಸ್‌ ಪ್ರಕರಣ: ಕಾರ್ತಿ ಚಿದಂಬರಂಗೆ ಸದ್ಯ ಬಂಧನ ಭೀತಿಯಿಲ್ಲ

ಏ. 16ರವರೆಗೆ ಬಂಧಿಸದಂತೆ ದೆಹಲಿ ಹೈಕೋರ್ಟ್ ಆದೇಶ

ಏಜೆನ್ಸೀಸ್
Published 24 ಮಾರ್ಚ್ 2018, 12:24 IST
Last Updated 24 ಮಾರ್ಚ್ 2018, 12:24 IST
ಕಾರ್ತಿ ಚಿದಂಬರಂ (ಸಂಗ್ರಹ ಚಿತ್ರ)
ಕಾರ್ತಿ ಚಿದಂಬರಂ (ಸಂಗ್ರಹ ಚಿತ್ರ)   

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರನ್ನು ಏಪ್ರಿಲ್ 16ರವರೆಗೆ ಬಂಧಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೀಕ್ಷಣಾ ಜಾಮೀನಿಗೆ ಕಾರ್ತಿ ಅವರು ಸಲ್ಲಿಸಿರುವ ಅರ್ಜಿಯ ಕುರಿತು 3 ವಾರಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಗಳಿಗೆ ವಿಶೇಷ ನ್ಯಾಯಾಧೀಶ ಒ. ಪಿ. ಸೈನಿ ಸೂಚಿಸಿದ್ದಾರೆ.

ನ್ಯಾಯಾಲಯದ ಅನುಮತಿ ಇಲ್ಲದೆ ಕಾರ್ತಿ ಅವರು ದೇಶದಿಂದ ಹೊರಹೊಗುವಂತಿಲ್ಲ ಎಂದೂ ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.