ADVERTISEMENT

ಐಎನ್‌ಎಕ್ಸ್ ಹಗರಣ: ಮಧ್ಯಂತರ ಜಾಮೀನು

ಏಜೆನ್ಸೀಸ್
Published 31 ಮೇ 2018, 8:05 IST
Last Updated 31 ಮೇ 2018, 8:05 IST
ಐಎನ್‌ಎಕ್ಸ್ ಹಗರಣ: ಮಧ್ಯಂತರ ಜಾಮೀನು
ಐಎನ್‌ಎಕ್ಸ್ ಹಗರಣ: ಮಧ್ಯಂತರ ಜಾಮೀನು   

ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಪಡೆದಿದ್ದ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಅವರಿಗೆ ದೆಹಲಿ ಹೈಕೋರ್ಟ್‌ ಐಎನ್‌ಎಕ್ಸ್ ಮಾಧ್ಯಮ ಹಗರಣ ಪ್ರಕರಣದಲ್ಲೂ ನಿರೀಕ್ಷಣಾ ಜಾಮೀನು ನೀಡಿದೆ.

ಇದರೊಂದಿಗೆ ಕಾಂಗ್ರೆಸ್‌ ಹಿರಿಯ ನಾಯಕ ಚಿದಂಬರಂ ಅವರಿಗೆ ಜುಲೈ 3ರವರೆಗೆ ಸಿಬಿಐ ಬಂಧನದಿಂದ ರಕ್ಷಣೆ ದೊರೆತಂತಾಗಿದೆ. ಅವರು ನಿರೀಕ್ಷಣಾ ಜಾಮೀನು ಕೋರಿ ಬುಧವಾರ ಅರ್ಜಿ ಸಲ್ಲಿಸಿದ್ದರು.

‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍‍[Related]

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿರುವ ಸಿಬಿಐ, ಮೇ. 31ರೊಳಗೆ ವಿಚಾರಣೆಗೆ ಹಾಜರಾಗುವಂತೆ ಪಿ. ಚಿದಂಬರಂಗೆ ನಿರ್ದೇಶನ ನೀಡಿತ್ತು.

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.