ನವದೆಹಲಿ: ಚೆಂಡು ವಿರೂಪಗೊಳಿಸಿದ ಪ್ರಕರಣ ಐಪಿಎಲ್ ಮೇಲೆ ಕೂಡ ಪರಿಣಾಮ ಬೀರುವ ಸಾಧ್ಯತೆ ಇದೆ. ಐಸಿಸಿಯಿಂದ ಅಮಾನತು ಶಿಕ್ಷೆಗೆ ಒಳಗಾಗಿರುವ ಸ್ಮಿತ್ ಐಪಿಎಲ್ನಲ್ಲಿ ಆಡುತ್ತಿರುವ ತಂಡ ರಾಜಸ್ತಾನ್ ರಾಯಲ್ಸ್ನ ನಾಯಕರಾಗಿದ್ದಾರೆ. ಅವರು ಈ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದರೆ ಅಜಿಂಕ್ಯ ರಹಾನೆಗೆ ನಾಯಕತ್ವ ವಹಿಸಲು ತಂಡ ಮುಂದಾಗಲಿದೆ.
‘ಚೆಂಡು ವಿರೂಪಗೊಳಿಸಲು ತಂಡದ ಆಟಗಾರನಿಗೆ ಸ್ಮಿತ್ ಬೆಂಬಲ ನೀಡಿದ್ದಾರೆ. ಈ ಮೂಲಕ ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ. ಹೀಗಾಗಿ ಅವರ ಬಗ್ಗೆ ರಾಜಸ್ತಾನ ರಾಯಲ್ಸ್ ಏನು ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಕುತೂಹಲ ಕೆರಳಿಸಿದೆ’ ಎಂದು ಬಿಸಿಸಿಐನ ಹಿರಿಯ ಪದಾಧಿಕಾರಿಯೊಬ್ಬರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.