ನವದೆಹಲಿ: ಗಡಿ ನಿಯಂತ್ರಣಾ ರೇಖೆ ಬಳಿ ಶನಿವಾರ ಕದನ ವಿರಾಮ ಉಲ್ಲಂಘನೆ ಮಾಡಿರುವ ಪಾಕಿಸ್ತಾನ ಸೇನೆ ಟಟ್ಟಾ ಪಾನಿ- ಕೃಷ್ಣ ಘಾಟಿ ವಲಯದಲ್ಲಿ ಭಾರತದ 5 ಯೋಧರನ್ನು ಹತ್ಯೆ ಮಾಡಿದೆ ಎಂದು ಪಾಕ್ ಹೇಳಿದೆ.
ಆದರೆ ಪಾಕಿಸ್ತಾನದ ವಾದ ಸತ್ಯಕ್ಕೆ ದೂರವಾದುದು ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ಹೇಳಿದ್ದಾರೆ.
ಶನಿವಾರ ಮಧ್ಯಾಹ್ನ ಟಟ್ಟಾ ಪಾನಿ ವಲಯದಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಸಿದೆ. ಈ ದಾಳಿಯಲ್ಲಿ ಭಾರತದ ಐವರು ಯೋಧರನ್ನು ಹತ್ಯೆ ಮಾಡಲಾಗಿದೆ ಮತ್ತು ಭಾರತೀಯ ಬಂಕರ್ಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನ ಸೇನೆ ಹೇಳಿದೆ.
ಪಾಕಿಸ್ತಾನದ ಈ ಹೇಳಿಕೆ ಬಗ್ಗೆ ಪ್ರತಿಕ್ರಯಿಸಿದ ಭಾರತೀಯ ಸೇನೆಯ ಹಿರಿಯ ಅಧಿಕಾರಿ, ಭಾರತೀಯ ಯೋಧರಿಗೆ ಯಾವುದೇ ಸಾವು ನೋವು ಸಂಭವಿಸಿಲ್ಲ. ಶುಕ್ರವಾರ ರಾತ್ರಿ 11 ಗಂಟೆಗೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಶನಿವಾರ ಮಧ್ಯಾಹ್ನದ ವರೆಗೆ ಗುಂಡಿನ ದಾಳಿ ಮುಂದುವರಿಸಿತ್ತು. ಈ ದಾಳಿಯಲ್ಲಿ ಮಹಿಳೆಯೊಬ್ಬರು ಸೇರಿದಂತೆ ಇಬ್ಬರು ನಾಗರಿಕರಿಗೆ ಗಾಯಗಳಾಗಿವೆ. ಪಾಕ್ ದಾಳಿಗೆ ನಾವು ತಕ್ಕ ಉತ್ತರ ನೀಡಿದ್ದೇವೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.