ADVERTISEMENT

ಒಖಿ ಚಂಡಮಾರುತದಿಂದ ಹಾನಿ: ನೆರವು ನೀಡಲು ತಮಿಳುನಾಡಿಗೆ ಕೇಂದ್ರದ ಭರವಸೆ

ಏಜೆನ್ಸೀಸ್
Published 2 ಡಿಸೆಂಬರ್ 2017, 13:01 IST
Last Updated 2 ಡಿಸೆಂಬರ್ 2017, 13:01 IST
ಒಖಿ ಚಂಡಮಾರುತದಿಂದ ಹಾನಿ: ನೆರವು ನೀಡಲು ತಮಿಳುನಾಡಿಗೆ ಕೇಂದ್ರದ ಭರವಸೆ
ಒಖಿ ಚಂಡಮಾರುತದಿಂದ ಹಾನಿ: ನೆರವು ನೀಡಲು ತಮಿಳುನಾಡಿಗೆ ಕೇಂದ್ರದ ಭರವಸೆ   

ಚೆನ್ನೈ: ಒಖಿ ಚಂಡಮಾರುತದಿಂದ ಕನ್ಯಾಕುಮಾರಿ ಮತ್ತು ತಿರುನೆಲ್ವೇಲಿ ಜಿಲ್ಲೆಗಳಲ್ಲಿ ಆಗಿರುವ ಹಾನಿಯ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರ್ಕಾರದ ನೆರವು ಕೋರಲು ತಮಿಳುನಾಡು ಸರ್ಕಾರ ಮುಂದಾಗಿದೆ.

ಶುಕ್ರವಾರ ತಡರಾತ್ರಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಜತೆ ಮಾತುಕತೆ ನಡೆಸಿದ್ದು, ಹಾನಿಯ ಕುರಿತು ಸಂಕ್ಷಿಪ್ತ ಮಾಹಿತಿ ಪಡೆದಿದ್ದಾರೆ. ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾಗಿ ಮುಖ್ಯಮಂತ್ರಿ ಕಚೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ವಿಪತ್ತು ನಿರ್ವಹಣೆಗೆ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು ಹಾಗೂ ಅವುಗಳನ್ನು ತ್ವರಿತವಾಗಿ ಜಾರಿ ಮಾಡಲು ಹಿರಿಯ ಸಚಿವರು ಹಾಗೂ ಐಎಎಸ್‌ ಅಧಿಕಾರಿಗಳನ್ನು ನಿಯೋಜಿಸಿರುವ ಕುರಿತು ಪಳನಿಸ್ವಾಮಿ ಪ್ರಧಾನಿಗೆ ವಿವರಿಸಿದ್ದಾರೆ.

ADVERTISEMENT

ಕಡಿತಗೊಂಡಿರುವ ವಿದ್ಯುತ್‌ ಸಂಪರ್ಕ ಸರಿಪಡಿಸಲು ಮತ್ತು ಕಾಣೆಯಾಗಿರುವ ಮೀನುಗಾರರನ್ನು ಪತ್ತೆ ಮಾಡಲು ತ್ವರಿತ ಕಾರ್ಯಾಚರಣೆ ನಡೆದಿರುವುದಾಗಿ ತಿಳಿಸಿದ್ದು, ಹಾನಿಯ ಸಂಪೂರ್ಣ ವರದಿಯನ್ನು ಕೇಂದ್ರಕ್ಕೆ ಸಲ್ಲಿಸುವುದಾಗಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.