ಬೆಂಗಳೂರು: ‘ಒಖಿ’ ಚಂಡಮಾರುತ ಅಬ್ಬರಕ್ಕೆ ಸಿಲುಕಿರುವ ಮೀನುಗಾರರ ರಕ್ಷಣಾ ಕಾರ್ಯಾಚರಣೆಯನ್ನು ಭಾರತೀಯ ನೌಕಾಪಡೆ ಭಾನುವಾರವೂ ಮುಂದುವರೆಸಿದೆ.
ಕೇರಳದ ಸಮುದ್ರದಲ್ಲಿ ಅಪಾಯದಲ್ಲಿ ಸಿಲುಕಿದ್ದ ಮೀನುಗಾರರ ದೋಣಿಗಳನ್ನು ಪತ್ತೆ ಮಾಡಿ, ಅವುಗಳನ್ನು ರಕ್ಷಿಸುವ ಕಾರ್ಯವನ್ನು ನೌಕಾಪಡೆಯ ಐಎನ್ಎಸ್ ಶಾರ್ದಾ ನೌಕೆ ಮಾಡಿದೆ.
ರಕ್ಷಣಾ ಕಾರ್ಯಕ್ಕೆ 10 ನೌಕೆಗಳು ಹಾಗೂ 8 ಹೆಲಿಕಾಪ್ಟರ್ಗಳನ್ನು ನಿಯೋಜಿಸಲಾಗಿದೆ ಎಂದು ನೌಕಾಪಡೆಯ ವಕ್ತಾರರು ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.