ADVERTISEMENT

ಒಖಿ ಚಂಡಮಾರುತ: ಸಾವಿನ ಸಂಖ್ಯೆ 14; ಕಾಣೆಯಾದ 126 ಮಂದಿಗಾಗಿ ಶೋಧ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 15:10 IST
Last Updated 2 ಡಿಸೆಂಬರ್ 2017, 15:10 IST
ಒಖಿ ಚಂಡಮಾರುತ: ಸಾವಿನ ಸಂಖ್ಯೆ 14; ಕಾಣೆಯಾದ 126 ಮಂದಿಗಾಗಿ ಶೋಧ
ಒಖಿ ಚಂಡಮಾರುತ: ಸಾವಿನ ಸಂಖ್ಯೆ 14; ಕಾಣೆಯಾದ 126 ಮಂದಿಗಾಗಿ ಶೋಧ   

ತಿರುವನಂತಪುರಂ: ಕೇರಳದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ ಒಖಿ ಚಂಡಮಾರುತದ ಅಬ್ಬರಕ್ಕೆ ಶನಿವಾರ 7 ಮಂದಿ ಸಾವಿಗೀಡಾಗಿದ್ದಾರೆ. ಸಮುದ್ರದಲ್ಲಿ ಕಾಣೆಯಾದವರಲ್ಲಿ 450 ಮಂದಿಯನ್ನು ರಕ್ಷಿಸಲಾಗಿದೆ. ಆದರೆ ನೂರಕ್ಕಿಂತಲೂ ಹೆಚ್ಚು ಮೀನುಗಾರರರು ನಾಪತ್ತೆಯಾಗಿದ್ದು ಅವರ ಬಗ್ಗೆ ಯಾವುದೇ  ಮಾಹಿತಿ ಲಭ್ಯವಾಗಿಲ್ಲ. ನಾಪತ್ತೆಯಾದ ವ್ಯಕ್ತಿಗಳಿಗಾಗಿ ಶೋಧ ಕಾರ್ಯ ಭರದಿಂದ ಸಾಗಿದೆ. ಭಾರಿ ಮಳೆಯಿಂದಾಗಿ ಉಂಟಾದ ಅನಾಹುತದಲ್ಲಿ ಸಾವಿಗೀಡಾದವರ ಸಂಖ್ಯೆ 14 ಆಗಿದೆ ಎಂದು ಸರ್ಕಾರದ ಮೂಲಗಳು ಹೇಳಿವೆ.

ಕಾಣೆಯಾಗಿರುವ 120 ಮಂದಿ ತಿರುವನಂತಪುರದ ವಿವಿಧ ಕೇಂದ್ರಗಳಿಂದ ಮೀನುಗಾರಿಕೆಗಾಗಿ ಸಮುದ್ರಕ್ಕಿಳಿದವರಾಗಿದ್ದಾರೆ.ಆಲೆಪ್ಪಿಯಿಂದ 5 ಮಂದಿ ಹಾಗೂ ಕಾಸರಗೋಡಿನಿಂದ ಒಬ್ಬ ವ್ಯಕ್ತಿಯನ್ನು ಪತ್ತೆ ಹಚ್ಚಿರುವುದಾಗಿ ಕಂದಾಯ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT