ADVERTISEMENT

ಒಡಿಶಾದಲ್ಲಿ ಪ್ರವಾಹ: ಸತ್ತವರ ಸಂಖ್ಯೆ 19ಕ್ಕೆ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST
ಒಡಿಶಾದಲ್ಲಿ ಪ್ರವಾಹ: ಸತ್ತವರ ಸಂಖ್ಯೆ 19ಕ್ಕೆ
ಒಡಿಶಾದಲ್ಲಿ ಪ್ರವಾಹ: ಸತ್ತವರ ಸಂಖ್ಯೆ 19ಕ್ಕೆ   

ಭುವನೇಶ್ವರ(ಐಎಎನ್‌ಎ):ಒಡಿಶಾದಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ ಮಂಗಳವಾರ 19ಕ್ಕೆ ತಲುಪಿದ್ದು, 20 ಲಕ್ಷಕ್ಕೂ ಹೆಚ್ಚು ಜನ ತೊಂದರೆಗೀಡಾಗಿದ್ದಾರೆ.

ಭಾರಿ ಮಳೆಯಾಗುತ್ತಿರುವುದರಿಂದ ಹಿರಾಕುಡ್ ಜಲಾಶಯದಿಂದ ಹೆಚ್ಚುವರಿ ನೀರನ್ನು ಬಿಡಲಾಗಿದೆ. ಇದರಿಂದ ಒಟ್ಟು 30 ಜಿಲ್ಲೆಗಳ ಪೈಕಿ 19 ಜಿಲ್ಲೆಗಳಲ್ಲಿನ 3,505 ಮನೆಗಳಿಗೆ ಹಾನಿಯಾಗಿದೆ.

ನೀರು ಇಳಿಮುಖವಾಗಿರುವ ಪ್ರದೇಶಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ವೈದ್ಯರನ್ನು ಕಳುಹಿಸಲಾಗಿದೆ. ಮಳೆ ನೀರಿನಿಂದ ರೋಗ ಹರಡುವ ಸಾಧ್ಯತೆ ಇರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.