ಫೂಲ್ಬನಿ, ಒಡಿಶಾ (ಪಿಟಿಐ): ಕಂಧಮಲ್ನಲ್ಲಿ 2008ರಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ 13 ಮಂದಿಗೆ ತ್ವರಿತ ನ್ಯಾಯಾಲಯವು 6 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಸಾಕ್ಷ್ಯ ಕೊರತೆ ಕಾರಣದಿಂದ 6 ಮಂದಿಯನ್ನು ಖುಲಾಸೆಗೊಳಿಸಲಾಗಿದೆ. ಪ್ರತಿಯೊಬ್ಬ ಅಪರಾಧಿಗೂ ರೂ 5,000 ದಂಡ ವಿಧಿಸಲಾಗಿದ್ದು, ತಪ್ಪಿದಲ್ಲಿ ಮತ್ತೆ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.