ಶ್ರೀನಗರ: ಕಠುವಾ ಅತ್ಯಾಚಾರ ಪ್ರಕರಣದ ಆರೋಪಿ ವಿಶಾಲ್ ಜಂಗೋತ್ರನ ಸಹಿ, ಪರೀಕ್ಷೆಯ ಹಾಜರಾತಿಯಲ್ಲಿ ಮಾಡಿರುವ ಸಹಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯದ (ಸಿಎಫ್ಎಸ್ಎಲ್) ವರದಿ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಸಲ್ಲಿಸಿರುವ ವರದಿಯಲ್ಲಿ ಸಿಎಫ್ಎಸ್ಎಲ್ ಈ ಅಂಶ ಉಲ್ಲೇಖಿಸಿದೆ ಎಂದು ತನಿಖಾ ತಂಡದ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಅಪರಾಧ ನಡೆದ ವೇಳೆ ತಾನು ಕಠುವಾದಲ್ಲಿ ಇರಲಿಲ್ಲ ಎನ್ನುವುದನ್ನು ಸಾಬೀತುಪಡಿಸಲು ಜಂಗೋತ್ರ, ಆ ವೇಳೆ ಮೀರತ್ನಲ್ಲಿ ವಿಶ್ವವಿದ್ಯಾಲಯದ ಪರೀಕ್ಷೆಗೆ ಹಾಜರಾಗಿದ್ದಾಗಿ ಹೇಳಿಕೊಂಡಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.