ನವದೆಹಲಿ (ಪಿಟಿಐ): ಕಲ್ಲಿದ್ದಲು ಗಣಿ ಮಂಜೂರಾತಿಯ ನಾಪತ್ತೆಯಾಗಿರುವ ಕಡತಗಳಿಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ಸಂಸ್ಥೆಯು (ಸಿಬಿಐ) ಎರಡು ದಿನಗಳೊಳಗೆ ಪ್ರಾಥಮಿಕ ತನಿಖೆ ಆರಂಭಿಸಲಿದೆ.
ಕಲ್ಲಿದ್ದಲು ಸಚಿವಾಲಯದ ಅಧಿಕಾರಿಗಳೊಂದಿಗೆ ಹಗರಣದ ತನಿಖಾಧಿಕಾರಿಗಳು ಬುಧವಾರ ಮಹತ್ವದ ಸಭೆ ನಡೆಸಿದ ನಂತರ ಈ ತೀರ್ಮಾನ ತೆಗೆದುಕೊಳ್ಳಲಾಯಿತು.
ಕಲ್ಲಿದ್ದಲು ಗಣಿ ಮಂಜೂರಾತಿಗೆ ಸಂಬಂಧಿಸಿದ 15ರಿಂದ 18 ಕಡತಗಳು ನಾಪತ್ತೆಯಾಗಿವೆ, ಶೋಧನಾ ಸಮಿತಿಯ ನಡಾವಳಿಯನ್ನು ದಾಖಲಿಸಿದ ಕಡತವೂ ಇದರಲ್ಲಿ ಸೇರಿರುವ ವಿಷಯ ಸೇರಿದಂತೆ ಹಲವು ಸಂಗತಿಗಳು ಸಭೆಯಲ್ಲಿ ಪ್ರಸ್ತಾಪಕ್ಕೆ ಬಂದವು ಎಂದು ಉನ್ನತ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.