ADVERTISEMENT

ಕದನ ವಿರಾಮ ಉಲ್ಲಂಘನೆ: ಯೋಧ ಸಾವು

ಪಿಟಿಐ
Published 12 ಅಕ್ಟೋಬರ್ 2017, 19:30 IST
Last Updated 12 ಅಕ್ಟೋಬರ್ 2017, 19:30 IST

ಜಮ್ಮು : ಪಾಕಿಸ್ತಾನ ಸೇನೆಯು ಕದನ ವಿರಾಮ ಉಲ್ಲಂಘಿಸಿ ಪೂಂಛ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗುರುವಾರ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಮತ್ತು ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.

ಪಾಕ್‌ ದಾಳಿಗೆ ಭಾರತ ಸೇನೆಯಿಂದಲೂ ತಕ್ಕ ಉತ್ತರ ನೀಡಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.

ಕಳೆದ ಅಕ್ಟೋಬರ್‌ 6ರಂದು ರಜೌರಿ ಜಿಲ್ಲೆಯ ಬಾಬಾ ಖೋರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪಾಕ್‌ ಸೇನೆ ದಾಳಿ ನಡೆಸಿತ್ತು. ಅಕ್ಟೋಬರ್‌ 4ರಂದು ನಡೆಸಿದ ದಾಳಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.