ADVERTISEMENT

ಕನಿಮೊಳಿ ಮತ್ತೆ ಜಾಮೀನು ಅರ್ಜಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2011, 19:30 IST
Last Updated 16 ಸೆಪ್ಟೆಂಬರ್ 2011, 19:30 IST

ನವದೆಹಲಿ(ಪಿಟಿಐ): 2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಸಂಸದೆ ಕನಿಮೊಳಿ ಮತ್ತು ಕಲೈಂಜ್ಞರ್ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಶರದ್ ಕುಮಾರ್ ಅವರು ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ಹೊಸದಾಗಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಅಡ್ವಾಣಿ ರಥ ಯಾತ್ರೆ ಸಿಪಿಎಂ ಲೇವಡಿ
ನವದೆಹಲಿ (ಪಿಟಿಐ):
ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರು ಭ್ರಷ್ಟಾಚಾರದ ವಿರುದ್ಧ ನಡೆಸಲು ಉದ್ದೇಶಿಸಿರುವ ರಥಯಾತ್ರೆ ಪ್ರಹಸನದ ಮತ್ತೊಂದು ಮುಖ ಎಂದು ಸಿಪಿಎಂ ಲೇವಡಿ ಮಾಡಿದೆ.
ಪಕ್ಷದ ಮುಖವಾಣಿ `ಪೀಪಲ್ಸ್ ಡೆಮಾಕ್ರಸಿ~ಯ ಇತ್ತೀಚಿನ ಸಂಚಿಕೆಯ ಸಂಪಾದಕೀಯದಲ್ಲಿ ಹಿರಿಯ ನಾಯಕ ಸೀತಾರಾಂ ಯಚೂರಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.