ನವದೆಹಲಿ: ‘ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಬಗ್ಗೆ ಹಲವರು ಸುಳ್ಳು ಸುದ್ದಿ ಹರಡುತ್ತಿದ್ದಾರೆ. ಅವಕ್ಕೆಲ್ಲಾ ಗಮನ ಕೊಡಬೇಡಿ. ಪ್ರತಿ ಬೆಳೆಗೆ ತಗಲುವ ಎಲ್ಲಾ ಸ್ವರೂಪದ ವೆಚ್ಚಗಳನ್ನು ಪರಿಗಣಿಸಿಯೇ ಎಂಎಸ್ಪಿ ನಿಗದಿ ಮಾಡುತ್ತೇವೆ’ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದರು.
ಕನಿಷ್ಠ ಬೆಂಬಲ ಬೆಲೆ ಪ್ರಮಾಣ ಉತ್ಪಾದನಾ ವೆಚ್ಚದ ಒಂದೂವರೆ ಪಟ್ಟು ಹೆಚ್ಚಾಗಿರಲಿದೆ ಎಂದು ಶನಿವಾರ ಇಲ್ಲಿ ಆರಂಭವಾದ ಕೃಷಿ ಉನ್ನತಿ ಮೇಳದಲ್ಲಿ ಅವರು ಘೋಷಿಸಿದರು.
ನಿಜವಾದ ಫಲಾನುಭವಿಗಳಿಗೆ ಎಂಎಸ್ಪಿ ಲಾಭ ತಲುಪುವಂತೆ ಹೊಸ ವ್ಯವಸ್ಥೆ ರೂಪಿಸುವ ಬಗ್ಗೆ ಎಲ್ಲ ರಾಜ್ಯ ಸರ್ಕಾರಗಳ ಜತೆ ಮಾತುಕತೆ ನಡೆಯುತ್ತಿದೆ. ರೈತರು ಎಣ್ಣೆಬೀಜಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಬೇಕು. ಇದರಿಂದ ಖಾದ್ಯ ತೈಲಗಳ ಆಮದನ್ನು ಗಣನೀಯ ಪ್ರಮಾಣದಲ್ಲಿ ಕಡಿಮೆ ಮಾಡಬಹುದು. ಸಾವಯವ ಕೃಷಿಗೆ ಒತ್ತು ನೀಡುವ ಮೂಲಕ 2022ರ ವೇಳೆಗೆ ಯೂರಿಯಾ ಬಳಕೆಯನ್ನು ಅರ್ಧದಷ್ಟು ಕಡಿಮೆ ಮಾಡಬೇಕು ಎಂದು ಪ್ರಧಾನಿ ಮನವಿ ಮಾಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.