ನವದೆಹಲಿ (ಪಿಟಿಐ): ದೇಶದಲ್ಲಿ ಕಪ್ಪು ಹಣದ ಹಾವಳಿಯನ್ನು ನಿಯಂತ್ರಿಸಲು ಕೇಂದ್ರ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿರುವ ಸಮಿತಿಯು ಈ ತಿಂಗಳ 9ರಂದು ಮೊದಲ ಸಭೆ ನಡೆಸುವ ಸಾಧ್ಯತೆಗಳಿವೆ.
ರಾಮ್ದೇವ್ ಅವರು ನಡೆಸಿದ ನಿರಶನ ಮತ್ತು ನಂತರದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಮಿತಿಯು ಶೀಘ್ರದಲ್ಲಿಯೇ ಸಭೆ ಸೇರಿ ಈ ಬಗ್ಗೆ ಚರ್ಚಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಕೇಂದ್ರ ನೇರ ತೆರಿಗೆಗಳ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ನೇತೃತ್ವದ ಸಮಿತಿಯಲ್ಲಿ ವಿವಿಧ ತನಿಖಾ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಸದಸ್ಯರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.