ಒಡಿಶಾ: ಕರಡಿಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾದ ಪ್ರಭು ಭಾತ್ರಾ ಎಂಬುವವರು ಕರಡಿಯ ದಾಳಿಗೆ ಮೃತಪಟ್ಟಿರುವ ಘಟನೆ ನಡೆದಿದೆ.
ಬುಧವಾರ ಸ್ಥಳೀಯ ಅರಣ್ಯ ಪ್ರದೇಶದ ಬಳಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ರಭು ಭಾತ್ರಾ ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಕೆಲವು ಪ್ರಯಾಣಿಕರೊಂದಿಗೆ ಹಿಂದಿರುಗುತ್ತಿದ್ದ ವೇಳೆ ಅರಣ್ಯದ ಬಳಿ ಕರಡಿಯನ್ನು ಕಂಡು ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ತಕ್ಷಣ ಕರಡಿ ಅವರ ಮೇಲೆ ದಾಳಿ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.