ನವದೆಹಲಿ (ಪಿಟಿಐ): ಆರ್ಥಿಕವಾಗಿ ತೀವ್ರ ನಷ್ಟಕ್ಕೆ ಗುರಿಯಾಗಿ ಬೀಗಮುದ್ರೆ ಘೋಷಿಸಿರುವ ಕಿಂಗ್ಫಿಷರ್ ವಿಮಾನಯಾನ ಕಂಪೆನಿಯು, ಮುಷ್ಕರ ನಿರತರಾಗಿರುವ ಸಿಬ್ಬಂದಿಗೆ ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿಕೊಂಡಿದೆ.
ಕಿಂಗ್ಫಿಷರ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಜಯ್ ಅಗರ್ವಾಲ್ ಅವರು ಈ ಕುರಿತು ಸಿಬ್ಬಂದಿಗೆ ಪತ್ರ ಬರೆದಿದ್ದಾರೆ. `ನಾವು ವಿಮಾನ ಹಾರಾಟ ಆರಂಭಿಸಿದ ಹೊರತು, ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗುವುದಿಲ್ಲ. ಸಂಕಷ್ಟವನ್ನು ಹೋಗಲಾಡಿಸಲು ನಿಮ್ಮ ಸಹಕಾರ ಅತ್ಯಗತ್ಯ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.