ADVERTISEMENT

ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಹೆಚ್ಚಳ: ಸಚಿವ ರಾಧಾಮೋಹನ್‌

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 19:30 IST
Last Updated 16 ಮಾರ್ಚ್ 2018, 19:30 IST

ನವದೆಹಲಿ: 2015ಕ್ಕೆ ಹೋಲಿಸಿದರೆ 2016ರಲ್ಲಿ ಕರ್ನಾಟಕದಲ್ಲಿ ರೈತರ ಆತ್ಮಹತ್ಯೆ ಪ್ರಮಾಣ ಶೇ 32ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌ ಅವರು ಶುಕ್ರವಾರ ಲೋಕಸಭೆಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೊ ಮಾಹಿತಿಯನ್ನು ಉಲ್ಲೇಖಿಸಿರುವ ಸಿಂಗ್‌, 2016ರಲ್ಲಿ ಕರ್ನಾಟಕದಲ್ಲಿ 2,079 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2015ರಲ್ಲಿ ಈ ಸಂಖ್ಯೆ 1,569 ಆಗಿತ್ತು ಎಂದಿದ್ದಾರೆ.

ದೇಶದ ಇತರ ದೊಡ್ಡ ರಾಜ್ಯಗಳಲ್ಲಿ ರೈತರ ಆತ್ಮಹತ್ಯೆ ಪ್ರಮಾಣದಲ್ಲಿ ಶೇ 10ರಷ್ಟು ಇಳಿಕೆಯಾಗಿದೆ. ಆದರೆ ಕರ್ನಾಟಕದಲ್ಲಿ ಪರಿಸ್ಥಿತಿ ಭಿನ್ನವಾಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.