ನವದೆಹಲಿ (ಪಿಟಿಐ): ಕರ್ನಾಟಕದ ದಕ್ಷಿಣ ಕನ್ನಡಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಲಘು ಭೂಕಂಪನ ಸಂಭವಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ರಿಕ್ಟರ್ ಮಾಪಕದಲ್ಲಿ 3.9 ಪ್ರಮಾಣದ ಭೂಕಂಪನ ಮಧ್ಯಾಹ್ನ 2.22 ಗಂಟೆ ವೇಳೆಗೆ ದಕ್ಷಿಣದ ರಾಜ್ಯದಲ್ಲಿ ಸಂಭವಿಸಿತು. ಭೂಕಂಪನದ ಕೇಂದ್ರ 5 ಕಿ.ಮೀ. ಆಳದಲ್ಲಿತ್ತು ಎಂದು ಇಲ್ಲಿಗೆ ಬಂದಿರುವ ಪ್ರಾಥಮಿಕ ವರದಿ ತಿಳಿಸಿದೆ.
ಭೂಕಂಪನದಿಂದ ಯಾವುದೇ ಸಾವು ನೋವಿನ ವರದಿಗಳು ತತ್ ಕ್ಷಣಕ್ಕೆ ಬಂದಿಲ್ಲ.
ಸಿಡ್ನಿ ವರದಿ (ಎಎಫ್ಪಿ): ಶಾಂತ ಸಾಗರದ ಸೊಲೊಮನ್ ದ್ವೀಪಗಳಲ್ಲಿ ಭಾನುವಾರ ಸಂಜೆ ರಿಕ್ಟರ್ ಮಾಪಕದಲ್ಲಿ 5.9 ಪ್ರಮಾಣದ ಭೂಕಂಪನ ಸಂಭವಿಸಿದೆ. ಆದರೆ ಯಾವುದೇ ಸಾವು ನೋವಿನ ವರದಿ ತಕ್ಷಣಕ್ಕೆ ಬಂದಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.