ADVERTISEMENT

ಕಲಾಪ: 13ನೇ ದಿನವೂ ವ್ಯರ್ಥ

ಪಿಟಿಐ
Published 21 ಮಾರ್ಚ್ 2018, 19:30 IST
Last Updated 21 ಮಾರ್ಚ್ 2018, 19:30 IST

ನವದೆಹಲಿ: ಸಂಸತ್ತಿನ ಉಭ‌ಯಸದನಗಳಲ್ಲಿ ಮಂಗಳವಾರವೂ ವಿರೋಧ ಪಕ್ಷಗಳ ಅಬ್ಬರ ಮುಂದುವರಿದಿದ್ದು, ಬಜೆಟ್‌ ಅಧಿವೇಶನದ 13ನೇ ದಿನದ ಕಲಾಪಗಳು ಸಂಪೂರ್ಣ ವ್ಯರ್ಥವಾಗಿವೆ.

ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸತತ ನಾಲ್ಕನೇ ದಿನವೂ ಚರ್ಚೆಗೆ ಬರಲಿಲ್ಲ.

ಕಲಾಪ ಆರಂಭವಾದ ಸ್ವಲ್ಪ ಹೊತ್ತಿನಲ್ಲೇ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎಐಎಡಿಎಂಕೆ ಮತ್ತು ಟಿಡಿಪಿ ಸದಸ್ಯರು ಪ್ರತಿಭಟನೆಗಿಳಿದರು. ಮಧ್ಯಾಹ್ನದವರೆಗೆ ಕಲಾಪ ಮುಂದೂಡಲಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ADVERTISEMENT

ಕಲಾಪಗಳಿಗೆ ಅಡ್ಡಿಪಡಿಸಿದ ಸದಸ್ಯರ ವರ್ತನೆಗೆ ಲೋಕಸಭೆಯ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಮತ್ತು ರಾಜ್ಯಸಭೆಯ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಕಿಡಿ ಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.