ADVERTISEMENT

ಕಲೈಞ್ಙರ್ ವಾಹಿನಿ ಮೇಲೆ ಸಿಬಿಐ ದಾಳಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2011, 9:15 IST
Last Updated 18 ಫೆಬ್ರುವರಿ 2011, 9:15 IST

ಚೆನ್ನೈ (ಪಿಟಿಐ/ಐಎಎನ್ಎಸ್): ಡಿಎಂಕೆ ಪಕ್ಷದ ವಾಹಿನಿ ಕಲೈಞ್ಙರ್ ಟಿ.ವಿ ವಾಹಿನಿಯ ಕಚೇರಿ ಸೇರಿದಂತೆ ಉನ್ನತ ಅಧಿಕಾರಿಗಳ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

2007-08ರಲ್ಲಿ ನಡೆದ 2ಜಿ- ತರಂಗಾಂತರ ಹಂಚಿಕೆಗೂ ತಮಗೂ ಯಾವುದೇ ನಂಟು ಇಲ್ಲ ಹಾಗೂ ಯಾವುದೇ ತನಿಖೆಗೂ ಸಿದ್ದ ಎಂದು ವಾಹಿನಿ ಹೇಳಿದ ಎರಡು ದಿನಗಳ ನಂತರ ಸಿಬಿಐ ತನ್ನ ದಾಳಿ ಆರಂಭಿಸಿದೆ.

2 ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧಿತರಾಗಿರುವ ಸ್ವಾನ್ ಟೆಲಿಕಾಂನ ಸ್ಥಾಪಕ ಶಾಹಿದ್ ಉಸ್ಮಾನ್ ಬಲ್ವಾನೊಂದಿಗೆ ಕಲೈಞ್ಙರ್ ವಾಹಿನಿ ಸಂಪರ್ಕ ಹೊಂದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಿಬಿಐ ಈ ದಾಳಿ ನಡೆಸಿದೆ.

ADVERTISEMENT

ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಕರುಣಾನಿಧಿ ಅವರ ಪುತ್ರಿ ಹಾಗೂ ಕಲೈಞ್ಙರ್ ಟಿವಿ ವಾಹಿನಿ ಹೊಂದಿರುವ ಕಂಪೆನಿಯ ಪ್ರವರ್ತಕರಲ್ಲಿ ಒಬ್ಬರಾದ ಕನಿಮೋಳಿ ಅವರು ಸಿಬಿಐ ದಾಳಿಗೆ ಸಂಬಂಧಿಸಿದಂತೆ ತಮಗೇನು ತಿಳಿಯದು ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.