ADVERTISEMENT

ಕಲ್ಮಾಡಿ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಲು ನ್ಯಾಯಾಲಯ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2012, 8:42 IST
Last Updated 21 ಡಿಸೆಂಬರ್ 2012, 8:42 IST

ನವದೆಹಲಿ (ಪಿಟಿಐ): ಕಾಮನ್ ವೆಲ್ತ್  ಕ್ರೀಡಾಕೂಟದಲ್ಲಿ ಭಾರೀ ಭ್ರಷ್ಟಾಚಾರ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್ ಕಲ್ಮಾಡಿ ಮತ್ತು ಇತರ 9 ಜನರ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸುವಂತೆ ಸಿಬಿಐಗೆ ದೆಹಲಿ ನ್ಯಾಯಾಲಯ ನಿರ್ದೇಶನ ನೀಡಿದೆ.


ಸುರೇಶ್ ಕಲ್ಮಾಡಿ, ಲಲಿತ್ ಬಾನೋಟ್, ಸ್ವಿಸ್ ಗುತ್ತಿಗೆ ಕಂಪೆನಿ ಸೇರಿದಂತೆ ಇತರ 9 ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ  ದೆಹಲಿ ವಿಶೇಷ ನ್ಯಾಯಾಲಯ ಸಿಬಿಐಗೆ ಶುಕ್ರವಾರ ಸೂಚನೆ ನೀಡಿದೆ. 

ಆರೋಪಿಗಳು ಮೋಸ, ಒಳಸಂಚು ನಡೆಸಿ ಸರ್ಕಾರಿ ಬೊಕ್ಕಸಕ್ಕೆ ಭಾರೀ ಪ್ರಮಾಣದ ನಷ್ಟ ಉಂಟುಮಾಡಿರುವುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.