
ಪ್ರಜಾವಾಣಿ ವಾರ್ತೆನವದೆಹಲಿ (ಪಿಟಿಐ): ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಕಳಪೆಯಾಗಿದೆ ಎಂದು ಲೇವಡಿ ಮಾಡಿರುವ ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್, `ರಾಹುಲ್ ಗಾಂಧಿ ಅವರಿಗೆ ಸತತ ಎರಡನೇ ಬಾರಿ ಸೋಲಾಗಿದೆ~ ಎಂದು ಕುಟುಕಿದ್ದಾರೆ. `ಸ್ವತಃ ಕಾಂಗ್ರೆಸ್ ಪಕ್ಷ ಹಾಗೂ ಮಾಧ್ಯಮಗಳು ರಾಹುಲ್ಗೆ ದೊಡ್ಡ ಮಟ್ಟದ ಪ್ರಚಾರ ಕೊಟ್ಟಿದ್ದವು. ಉತ್ತರ ಪ್ರದೇಶವನ್ನು ಕಾಂಗ್ರೆಸ್ ತನ್ನ ಪ್ರತಿಷ್ಠೆಯ ಕಣವನ್ನಾಗಿ ಮಾಡಿಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.