ADVERTISEMENT

ಕಾರ್ತಿ ಚಿದಂಬರಂ ಬಂಧನ ತಡೆ ಅವಧಿ ವಿಸ್ತರಣೆ

ಪಿಟಿಐ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST
ಕಾರ್ತಿ ಚಿದಂಬರಂ ಬಂಧನ ತಡೆ ಅವಧಿ ವಿಸ್ತರಣೆ
ಕಾರ್ತಿ ಚಿದಂಬರಂ ಬಂಧನ ತಡೆ ಅವಧಿ ವಿಸ್ತರಣೆ   

ನವದೆಹಲಿ: ಏರ್‌ಸೆಲ್‌–ಮ್ಯಾಕ್ಸಿಸ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರನ್ನು ಮೇ 2ರವರೆಗೂ ಬಂಧಿಸದಂತೆ ದೆಹಲಿ ಹೈಕೋರ್ಟ್‌ ಆದೇಶಿಸಿದೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳು (ಇ.ಡಿ) ದಾಖಲಿಸಿಕೊಂಡಿರುವ ಒಟ್ಟು ಎರಡು ಪ್ರಕರಣಗಳಿಗೆ ಸಂಬಂಧಿಸಿ ಸೋಮವಾರ ವಿಚಾರಣೆ ನಡೆಯಿತು.

ನಿರೀಕ್ಷಣಾ ಜಾಮೀನು ಕೋರಿ ಕಾರ್ತಿ ಸಲ್ಲಿಸಿರುವ ಅರ್ಜಿ ಕುರಿತು ಪ್ರತಿಕ್ರಿಯಿಸಲು ಇ.ಡಿ. ಪರ ವಕೀಲರು ಕಾಲಾವಕಾಶ ಕೋರಿದ್ದರಿಂದ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಅವರು ಈ ಆದೇಶ ಹೊರಡಿಸಿದರು.

ADVERTISEMENT

ಮಾರ್ಚ್‌ 24ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ, ಏಪ್ರಿಲ್‌ 16ರವರೆಗೆ ಕಾರ್ತಿ ಅವರನ್ನು ಬಂಧಿಸದಂತೆ ಆದೇಶಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.