ಹೈದರಾಬಾದ್: ತೆಲಂಗಾಣದ ನಲಗೊಂಡ ಜಿಲ್ಲೆಯ ವಡ್ಡಿಪಟ್ಲಾ ಗ್ರಾಮದಲ್ಲಿ ಟ್ರ್ಯಾಕ್ಟರೊಂದು ಕಾಲುವೆಗೆ ಉರುಳಿ 9 ಮಂದಿ ಮಹಿಳೆಯರು ಮೃತಪಟ್ಟಿದ್ದಾರೆ.
‘30 ಮಂದಿ ಕೃಷಿ ಕಾರ್ಮಿಕರು ಟ್ರ್ಯಾಕ್ಟರ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಮಗುಚಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
‘ಚಾಲಕ ಮೊಬೈಲ್ನಲ್ಲಿ ಮಾತನಾಡಿದ ಪರಿಣಾಮ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.