ADVERTISEMENT

ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು

​ಪ್ರಜಾವಾಣಿ ವಾರ್ತೆ
Published 18 ಮೇ 2018, 19:30 IST
Last Updated 18 ಮೇ 2018, 19:30 IST
ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು
ಕಾವೇರಿ: ಕೇಂದ್ರದ ಯೋಜನೆಗೆ ‘ಸುಪ್ರೀಂ’ ಅಸ್ತು   

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ಯೋಜನೆ ಕುರಿತಂತೆ ಶುಕ್ರವಾರ ತೀರ್ಪು ಪ್ರಕಟಿಸಿರುವ ಸುಪ್ರೀಂ ಕೋರ್ಟ್, ಕೇಂದ್ರ ಸರ್ಕಾರ ಸಲ್ಲಿಸಿದ್ದ ಪರಿಷ್ಕೃತ ಕರಡನ್ನು ಮಾನ್ಯ ಮಾಡಿದ್ದಾಗಿ ತಿಳಿಸಿದೆ.

ಮುಂಗಾರು ಹಂಗಾಮಿಗೆ ಮೊದಲೇ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಕಾರ್ಯಾರಂಭ ಮಾಡಬೇಕು ಎಂದು ತೀರ್ಪಿನಲ್ಲಿ ಸೂಚಿಸಿರುವ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಕಾವೇರಿ ಜಲವಿವಾದ ನ್ಯಾಯಮಂಡಳಿ ಸೂಚಿಸಿದ್ದ ‘ಮಂಡಳಿ’ ಮಾದರಿಯ ಪ್ರಾಧಿಕಾರ ಬೇಡ ಎಂದು ರಾಜ್ಯ ಸರ್ಕಾರ ಸಲ್ಲಿಸಿದ್ದ ಆಕ್ಷೇಪಣೆಯನ್ನು ತಳ್ಳಿಹಾಕಿದೆ.

ನೀರು ಹಂಚಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಲ್ಲಿಸಿರುವ ಕರಡು ಯೋಜನೆ ತಾರ್ಕಿಕ ಅಂತ್ಯ ತಲುಪಿದೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.