ADVERTISEMENT

ಕಾವೇರಿ ನೀರು ಹಂಚಿಕೆ: ತಮಿಳುನಾಡಿನಲ್ಲಿ ಐಪಿಎಲ್‌ ವಿರೋಧಿಸಿ ಪ್ರತಿಭಟನೆ

ಏಜೆನ್ಸೀಸ್
Published 10 ಏಪ್ರಿಲ್ 2018, 10:20 IST
Last Updated 10 ಏಪ್ರಿಲ್ 2018, 10:20 IST
ಚಿತ್ರ: ಎಎನ್‌ಐ ಟ್ವೀಟ್
ಚಿತ್ರ: ಎಎನ್‌ಐ ಟ್ವೀಟ್   

ಚೆನ್ನೈ: ಕಾವೇರಿ ಜಲವಿವಾದ ಕುರಿತು ನೀಡಿರುವ ತೀರ್ಪನ್ನು ಜಾರಿಗೊಳಿಸುವಲ್ಲಿ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿ, ತಮಿಳುನಾಡಿನಲ್ಲಿ ಟಿವಿಕೆ ಸದಸ್ಯರು ಐಪಿಎಲ್‌2018 ವಿರೋಧಿಸಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದ ಹೊರಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದ್ದಾರೆ.

ಈ ಸಂಬಂಧ ಪ್ರತಿಭಟನೆ ನಡೆಸಿದವರನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.