ADVERTISEMENT

ಕಾವೇರಿ ನ್ಯಾಯ ಮಂಡಳಿ ಅಧ್ಯಕ್ಷರ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ರಚಿಸಲಾಗಿರುವ ನ್ಯಾಯ ಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಎನ್.ಪಿ. ಸಿಂಗ್ ಅವರು ಅನಾರೋಗ್ಯದ ಕಾರಣ ರಾಜೀನಾಮೆ ಸಲ್ಲಿಸಿದ್ದಾರೆ.

80 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ಅವರು, ತಮ್ಮ ರಾಜೀನಾಮೆ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಬುಧವಾರ ಸಲ್ಲಿಸಿದ್ದಾರೆ ಎನ್ನಲಾಗಿದೆ.

ತಮಿಳುನಾಡು-ಕರ್ನಾಟಕ ರಾಜ್ಯಗಳ ನಡುವೆ ನದಿ ನೀರು ಹಂಚಿಕೆ ವಿಚಾರದಲ್ಲಿ ವಿವಾದ ಉಂಟಾದ ಕಾರಣ 1990ರಲ್ಲಿ ಈ ನ್ಯಾಯ ಮಂಡಳಿಯನ್ನು ನ್ಯಾಯಮೂರ್ತಿ ಚಿತ್ತತೋಷ್ ಮುಖರ್ಜಿ ಅವರ ನೇತೃತ್ವದಲ್ಲಿ ರಚಿಸಲಾಯಿತು. ಮುಖರ್ಜಿ 1995ರಲ್ಲಿ ರಾಜೀನಾಮೆ ನೀಡಿದ ಕಾರಣ ನ್ಯಾಯಮೂರ್ತಿ ಎನ್.ಪಿ. ಸಿಂಗ್ ಅವರನ್ನು ನ್ಯಾಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.