ADVERTISEMENT

ಕಾವೇರಿ ವಿಚಾರ ‘ಡಿಎಂಕೆಯಿಂದ ತಪ್ಪು ಮಾಹಿತಿ’

ಪಿಟಿಐ
Published 24 ಮಾರ್ಚ್ 2018, 19:30 IST
Last Updated 24 ಮಾರ್ಚ್ 2018, 19:30 IST

ಚೆನ್ನೈ: ಕಾವೇರಿ ನದಿ ನೀರಿನ ವಿಚಾರದಲ್ಲಿ ತಮಿಳುನಾಡಿನ ಜನರಿಗೆ ಡಿಎಂಕೆ ಪಕ್ಷವು ತಪ್ಪು ದಾರಿಗೆಳೆಯುತ್ತಿದೆ ಎಂದು ಕೇಂದ್ರ ಸಚಿವ ಪೊನ್ ರಾಧಾಕೃಷ್ಣನ್ ಆರೋಪಿಸಿದ್ದಾರೆ.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಅಂತರರಾಜ್ಯ ನದಿ ವಿವಾದದಲ್ಲಿ ರಾಜ್ಯದ ಜನತೆಗೆ ಒಳಿತಾಗುವಂತೆ ಬಿಜೆಪಿ ಹೆಜ್ಜೆಯಿಡಲಿದೆ’ ಎಂದು ತಿಳಿಸಿದರು.

‘ರಾಜ್ಯದ ಪಾಲಿನ ನೀರನ್ನು ಏಕೆ ಸರಿಯಾಗಿ ಬಿಡುಗಡೆ ಮಾಡುತ್ತಿಲ್ಲ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ತಮಿಳುನಾಡು ಕಾಂಗ್ರೆಸ್ ಘಟಕವು ಕರ್ನಾಟಕ ಸರ್ಕಾರವನ್ನು ಪ್ರಶ್ನಿಸಬೇಕು’ ಎಂದು ಅವರು ತರಾಟೆಗೆ ತೆಗೆದುಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.