ಶ್ರೀನಗರ/ನವದೆಹಲಿ: ಶ್ರೀನಗರದಲ್ಲಿ ರೊಚ್ಚಿಗೆದ್ದಿರುವ ಪ್ರತಿಭಟನಾಕಾರರು ಸಿಆರ್ಪಿಎಫ್ ವಾಹನದ ಮೇಲೆ ದಾಳಿ ಮಾಡಿದ್ದಾರೆ. ಸಿಆರ್ಪಿಎಫ್ ವಾಹನದ ಮೇಲೆ ದಾಳಿ ನಡೆಯುತ್ತಿದ್ದಂತೆ ರಭಸದಿಂದ ಬಂದ ವಾಹನಕ್ಕೆ ಸಿಲುಕಿ ಮೂವರು ಪ್ರತಿಭಟನಾಕಾರರು ಸಾವಿಗೀಡಾಗಿದ್ದಾರೆ.
ಹಿರಿಯ ಅಧಿಕಾರಿಯೊಬ್ಬರನ್ನು ಬಿಟ್ಟು ಬರುತ್ತಿರುವ ಹೊತ್ತಿಗೆ ರಸ್ತೆಗಿಳಿದ ಪ್ರತಿಭಟನಾಕಾರರು ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.