ADVERTISEMENT

ಕಾಶ್ಮೀರ ಬಂದ್: ಭಾಗಶಃ ಪರಿಣಾಮ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2011, 18:10 IST
Last Updated 22 ಫೆಬ್ರುವರಿ 2011, 18:10 IST

ಶ್ರೀನಗರ, (ಐಎಎನ್‌ಎಸ್): ಹುರಿಯತ್ ಕಾನ್ಫರೆನ್ಸ್ ಮಂಗಳವಾರ ನೀಡಿದ್ದ ಬಂದ್ ಕರೆಯಿಂದ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಭಾಗಶಃ ಅಸ್ತವ್ಯಸ್ತವಾಗಿತ್ತು.

ಹವಾಲ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗುರಿಪಡಿಸಲು ಕಾನ್ಫರೆನ್ಸ್‌ನ ನಾಯಕ ಸೈಯದ್ ಅಲಿ ಷಾ ಗಿಲಾನಿ ಅವರನ್ನು ದೆಹಲಿ ಬಿಟ್ಟು ತೆರಳದಂತೆ ಅಲ್ಲಿನ ಪೊಲೀಸರು ನಿರ್ಬಂಧ ಹೇರಿದ್ದನ್ನು ಖಂಡಿಸಿ ಬಂದ್ ಕರೆ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.