ADVERTISEMENT

ಕೂಡುಂಕುಳಂ ಸ್ಥಾವರ ಸುತ್ತ ಸ್ಥಿತಿ ಸುಧಾರಿಸುವ ಭರವಸೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2012, 19:30 IST
Last Updated 22 ಫೆಬ್ರುವರಿ 2012, 19:30 IST

ನವದೆಹಲಿ (ಪಿಟಿಐ):  ಕೂಡುಂಕುಳಂ ಪರಮಾಣು ಸ್ಥಾವರದ ಸುತ್ತಮುತ್ತ ಪ್ರಸ್ತುತ ಇರುವ ಪರಿಸ್ಥಿತಿಯು ನಾಲ್ಕೈದು ವಾರಗಳಲ್ಲಿ ಸಹಜ ಸ್ಥಿತಿಗೆ ಮರಳುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಭಾರತೀಯ ಪರಮಾಣು ವಿದ್ಯುತ್ ನಿಗಮ (ಎನ್‌ಪಿಸಿಐಎಲ್), ಆಗಸ್ಟ್ ವೇಳೆಗೆ ಸ್ಥಾವರ ಕಾರ್ಯಾರಂಭ ಮಾಡುವ ನಿರೀಕ್ಷೆ ಇದೆ ಎಂದು ಹೇಳಿದೆ.

`ನಾಲ್ಕರಿಂದ ಐದು ವಾರಗಳಲ್ಲಿ ಕೂಡುಂಕುಳಂನಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಬರಲಿದೆ ಎಂಬ ನಿರೀಕ್ಷೆ ನನ್ನದು~ ಎಂದು ಎನ್‌ಪಿಸಿಐಎಲ್‌ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಹಜ ಸ್ಥಿತಿಗೆ ಮರಳಿದ ಬಳಿಕ ಕೂಡುಂಕುಳಂ ಪರಮಾಣು ವಿದ್ಯುತ್ ಯೋಜನೆಯ 1000 ಮೆಗಾವ್ಯಾಟ್ ಸಾಮರ್ಥ್ಯದ ಮೊದಲ ವಿದ್ಯುತ್ ಘಟಕ ಕಾರ್ಯಾರಂಭಕ್ಕೆ ನಾಲ್ಕು ತಿಂಗಳ ಕಾಲಾವಕಾಶ ಬೇಕು ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.