ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್ ಸಜ್ಜಾಗಿದೆ.
ಅವಿಶ್ವಾಸ ಗೊತ್ತುವಳಿ ಮಂಡನೆ ಸಂದರ್ಭದಲ್ಲಿ ಹಾಜರಿರಬೇಕು ಎಂದು ಪಕ್ಷದ ಸಂಸದರಿಗೆ ಮೂರು ಸಾಲಿನ ವಿಪ್ ಜಾರಿಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಲಿದ್ದಾರೆ. ಅವಿಶ್ವಾಸ ಗೊತ್ತುವಳಿಗೆ ಇತರ ಪಕ್ಷಗಳ ನೆರವನ್ನೂ ಅವರು ಕೋರಿದ್ದಾರೆ ಎಂದು ಮೂಲಗಳು ಶುಕ್ರವಾರ ಮಾಹಿತಿ ನೀಡಿವೆ.
ಟಿಡಿಪಿ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್ ನೀಡಿವೆ. ಆದರೆ, ಸುಗಮ ಕಲಾಪ ನಡೆಯದ ಕಾರಣ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ಲಭಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.