
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ವೈಎಸ್ಆರ್ ಕಾಂಗ್ರೆಸ್ ಪಕ್ಷ ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಘೋಷಿಸಿದೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಕುರಿತು ವಿವಿಧ ಪಕ್ಷಗಳು ಗುರುವಾರ ಲೋಕಸಭೆಯಲ್ಲಿ ನಡೆಸಿದ ಪ್ರತಿಭಟನೆ ಗದ್ಧಲದ ರೂಪ ಪಡೆಯಿತು. ಇದೇ ಸಂದರ್ಭದಲ್ಲಿ ವೈಎಸ್ಆರ್ ಕಾಂಗ್ರೆಸ್ ಎನ್ಡಿಎ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಲುವಾಗಿ ನೋಟಿಸ್ ಜಾರಿ ಮಾಡಿದ್ದು, ಲೋಕಸಭೆಯ ವಿರೋಧ ಪಕ್ಷ ಸೇರಿ ಇತರ ಪಕ್ಷಗಳ ಬೆಂಬಲ ಕೋರಿದೆ.
ಅಗತ್ಯವಾದಲ್ಲಿ ತೆಲುಗು ದೇಶಂ ಪಾರ್ಟಿ(ಟಿಡಿಪಿ) ಅವಿಶ್ವಾಸ ಗೊತ್ತುವಳಿ ಮಂಡನೆಯನ್ನು ಬೆಂಬಲಿಸಲಿದೆ ಎಂದು ಆಂಧ್ರ ಪ್ರದೇಶ ಸಿಎಂ ಎನ್.ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.