ತಿರುವನಂತಪುರ: ಕೇರಳಕ್ಕೆ ಮುಂಗಾರು ಸೋಮವಾರವೇ ಪ್ರವೇಶಿಸಿದೆ ಎಂದು ಹವಾಮಾನ ಮುನ್ಸೂಚನೆಯ ಖಾಸಗಿ ಸಂಸ್ಥೆ ಸ್ಕೈಮೆಟ್ ಹೇಳಿದೆ. ಆದರೆ, ಈ ಹಿಂದೆ ಅಂದಾಜಿಸಿದಂತೆ ಮಂಗಳವಾರವೇ (ಮೇ 29) ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮುಂಗಾರು ಪ್ರವೇಶವಾಗಿದೆ ಎಂಬುದನ್ನು ಘೋಷಿಸಲು ಬೇಕಿರುವ ಎಲ್ಲ ಮಾನದಂಡಗಳೂ ಪೂರೈಕೆಯಾಗಿವೆ. ಮೇ 10ರ ಬಳಿಕ, ಲಭ್ಯ ಇರುವ 14 ಮಳೆ ಮಾಪನ ಕೇಂದ್ರಗಳ ಪೈಕಿ ಶೇ 60ರಷ್ಟಲ್ಲಿ 2.55 ಮಿ.ಮೀ.ಗಿಂತ ಹೆಚ್ಚು ಮಳೆ ದಾಖಲಾದರೆ ಮುಂಗಾರು ಆರಂಭವಾಗಿದೆ ಎಂದೇ ಅರ್ಥ ಎಂದು ಸ್ಕೈಮೆಟ್ ಹೇಳಿದೆ.
ಕೇರಳಕ್ಕೆ ಮುಂಗಾರು ಪ್ರವೇಶವನ್ನು ನಿರ್ಧರಿಸುವ 14 ಮಾಪನ ಕೇಂದ್ರಗಳಲ್ಲಿ ಮಂಗಳೂರು ಕೂಡ ಒಂದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.