ADVERTISEMENT

ಕೇರಳಕ್ಕೆ ಮುಂಗಾರು ಮಳೆಯ ಪ್ರವೇಶ

​ಪ್ರಜಾವಾಣಿ ವಾರ್ತೆ
Published 1 ಜೂನ್ 2013, 19:59 IST
Last Updated 1 ಜೂನ್ 2013, 19:59 IST

ತಿರುವನಂತಪುರ (ಐಎಎನ್‌ಎಸ್): ನೈರುತ್ಯ ಮುಂಗಾರು ಕೇರಳವನ್ನು ಶನಿವಾರ ಪ್ರವೇಶಿಸಿದ್ದು, ಕಳೆದ 24 ಗಂಟೆಗಳಿಂದ ರಾಜ್ಯದ್ಲ್ಲೆಲೆಡೆ ವ್ಯಾಪಕ ಮಳೆಯಾಗುತ್ತಿದೆ.ಕರ್ನಾಟಕದ ಕೆಲವು ಭಾಗಗಳಲ್ಲಿ, ತಮಿಳುನಾಡಿನ ಬಹುತೇಕ ಕಡೆಗಳಲ್ಲಿ ಮಳೆಯಾಗುತ್ತಿದೆ ಇನ್ನು 48 ಗಂಟೆಗಳಲ್ಲಿ ಅರಬ್ಬಿ ಸಮುದ್ರದ ಮಧ್ಯಭಾಗ, ಕರ್ನಾಟಕದ ಉಳಿದ ಭಾಗ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಬಂಗಾಳಕೊಲ್ಲಿಯ ಬಹುತೇಕ ಭಾಗಗಳಿಗೆ ಮುಂಗಾರು ಮಳೆ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಎಲ್.ಎಸ್. ರಾಥೋಡ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.