ADVERTISEMENT

ಕೇರಳ: ಭಾರಿ ಮಳೆಗೆ ಪ್ರವಾಹ, ಭೂಕುಸಿತಕ್ಕೆ ನಾಲ್ವರು ಸಾವು, 10 ಮಂದಿ ಕಣ್ಮರೆ

ಪಿಟಿಐ
Published 14 ಜೂನ್ 2018, 11:58 IST
Last Updated 14 ಜೂನ್ 2018, 11:58 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ತಿರುವನಂತಪುರ: ಕೇರಳದ ಉತ್ತರ ಭಾಗದಲ್ಲಿ ಭಾರಿ ಮಳೆ ಬೀಳುತ್ತಿದ್ದು, ಪ್ರವಾಹ ಹಾಗೂ ಭೂಕುಸಿತ ಉಂಟಾಗಿ ಗುರುವಾರ ಮೂವರು ಮಕ್ಕಳು ಸೇರಿ ನಾಲ್ವರು ಮೃತಪಟ್ಟು, 10 ಮಂದಿ ಕಣ್ಮರೆಯಾಗಿದ್ದಾರೆ.

ಬುಧವಾರ ಇಡೀ ರಾತ್ರಿ ಬಿದ್ದ ಭಾರಿ ಮಳೆಗೆ ಕೊಯಿಕ್ಕೋಡ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಬೆಳಿಗ್ಗೆ ಭೂಕುಸಿತ ಉಂಟಾದ ಘಟನೆ ನಡೆದಿದ್ದು, ನಾಲ್ವರು ಸಾವಿಗೀಡಾಗಿ, 10 ಜನ ಕಣ್ಮರೆಯಾಗಿದ್ದಾರೆ ಎಂದು ವರದಿಯಾಗಿದೆ.

ಮೇ ಕೊನೆಯ ವಾರ ನೈಋತ್ಯ ಮುಂಗಾರು ಆರಂಭವಾದ ಬಳಿಕ, ಇಲ್ಲಿಯವರೆಗೆ ರಾಜ್ಯದಲ್ಲಿ ಮೃತರ ಸಂಖ್ಯೆ 27ಕ್ಕೇರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಭೂ ಕುಸಿತವಾದ ಗ್ರಾಮದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಣ್ಮರೆಯಾದವರಿಗಾಗಿ ಶೋಧ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.