ಅಮರಾವತಿ (ಪಿಟಿಐ): ಮಹಾರಾಷ್ಟ್ರದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮೊದಲು, ಫೆ 12ರಂದು ಪೊಲೀಸರು 1ಕೋಟಿ ನಗದು ಹಣವನ್ನು ವಶಪಡಿಸಿಕೊಂಡಿರುವುದಕ್ಕೆ ತಮ್ಮ ಹಾಗೂ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ (ಎಂಪಿಸಿಸಿ) ನಡುವಿನ `ಸಂವಹನ ಅಂತರ~ ಕಾರಣ ಎಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪುತ್ರ ಕಾಂಗ್ರೆಸ್ ಶಾಸಕ ರಾವ್ಸಾಹೇಬ್ ಶೆಖಾವತ್ ಮಂಗಳವಾರ ಹೇಳಿದ್ದಾರೆ.
`ಈ ಘಟನೆಗೆ ಸಂವಹನದಲ್ಲಾದ ಲೋಪವೇ ಕಾರಣ. ಹಣವನ್ನು ಹೇಗೆ ಮತ್ತು ಯಾವಾಗ ರವಾನಿಸಲಾಗುತ್ತದೆ ಎಂಬ ಬಗ್ಗೆ ಎಂಪಿಸಿಸಿ ನನಗೆ ಮಾಹಿತಿ ನೀಡಿರಲಿಲ್ಲ. ಅಮರಾವತಿ ಪೊಲೀಸರು ವಾಹನವನ್ನು ವಶಪಡಿಸಿಕೊಂಡು ಹಣವನ್ನು ಜಪ್ತಿ ಮಾಡಿದ ಬಳಿಕವಷ್ಟೇ ಈ ಬಗ್ಗೆ ತಿಳಿಯಿತು~ ಎಂದು ಶೆಖಾವತ್ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.