ಮುಜಫ್ಪರ್ನಗರ(ಪಿಟಿಐ): ಕೆಲ ದಿನಗಳ ಹಿಂದೆ ಇಲ್ಲಿ ನಡೆದ ಕೋಮು ಗಲಭೆಗಳ ಹಿನ್ನೆಲೆಯಲ್ಲಿ ಕೋಮು ಗಲಭೆ ತಡೆ ಮಸೂದೆ ಲೋಕಸಭೆ ಯಲ್ಲಿ ಅಂಗೀಕಾರ ವಾಗಲು ಎಲ್ಲ ರಾಜಕೀಯ ಪಕ್ಷಗಳ ಒಮ್ಮತಾ ಭಿಪ್ರಾಯ ಪಡೆಯಲು ಯತ್ನಿಸಲಾ ಗುವುದು ಎಂದು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕೆ.ರೆಹಮಾನ್ ಹೇಳಿದ್ದಾರೆ.
‘ಮಸೂದೆ ಬಗ್ಗೆ ಎಲ್ಲ ರಾಜಕೀಯ ಪಕ್ಷಗಳಲ್ಲೂ ಒಮ್ಮತಾಭಿಪ್ರಾಯ ಮೂಡಿಸಲು ಸರ್ಕಾರ ಪ್ರಯತ್ನಿಸ ಲಿದೆ. ಆ ನಂತರವೇ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಲು ಬಯಸಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.