ನವದೆಹಲಿ (ಪಿಟಿಐ): 2ಜಿ ಸ್ಪೆಕ್ಟ್ರಂ ಪರವಾನಗಿ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಕಲಾಪದಲ್ಲಿ ಪಾಲ್ಗೊಂಡು ತಮ್ಮ ವಕೀಲರಿಗೆ ಸಹಾಯ ಮಾಡಲು ಅವಕಾಶ ಕೋರಿದ್ದ ಬಂಧಿತ ಮಾಜಿ ದೂರಸಂಪರ್ಕ ಸಚಿವ ಎ.ರಾಜಾ ಅವರ ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿತು.
`ರಾಜಾ ಅವರ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಅ.10ಕ್ಕೆ ಮುಂದೂಡಲಾಗಿದೆ~ ಎಂದು ಬೆಳಿಗ್ಗೆ ಸಿಬಿಐ ವಿಶೇಷ ನ್ಯಾಯಾಧೀಶ ಒ.ಪಿ.ಸೈನಿ ಪ್ರಕಟಿಸಿದರು.
ಸುಪ್ರೀಂ ಕೋರ್ಟಿನಲ್ಲಿ ನಡೆಯುವ ಪ್ರಕರಣದ ಕಲಾಪಗಳನ್ನು ಗಮನಿಸುವುದರಿಂದ ತಮ್ಮ ಕಕ್ಷಿದಾರರು ಈ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಅರಿಯಲು ಸಹಾಯಕವಾಗುತ್ತದೆ. ಆದ್ದರಿಂದ ಅವರಿಗೆ ಕಲಾಪ ವೀಕ್ಷಣೆಗೆ ಅನುಮತಿ ನೀಡಬೇಕೆಂದು ರಾಜಾ ಪರ ವಕೀಲರು ಅರ್ಜಿಯಲ್ಲಿ ಕೋರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.