ADVERTISEMENT

ಕ್ಷಮೆ ಕೇಳಿದ ಹೈ ಕಮಿಷನರ್

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ನವದೆಹಲಿ (ಪಿಟಿಐ/ಐಎಎನ್‌ಎಸ್): ಕೆಲವು ತಮಿಳು ಸಂಸತ್ ಸದಸ್ಯರು ಮತ್ತು ಎಲ್‌ಟಿಟಿಇ ನಡುವಿನ ಸಂಬಂಧದ ಕುರಿತಂತೆ ನೀಡಿದ್ದ ಹೇಳಿಕೆ ಬಗ್ಗೆ ಶ್ರೀಲಂಕಾದ ಹೈ ಕಮಿಷನರ್ ಪ್ರಸಾದ್ ಕರಿಯವಾಸಮ್ ಗುರುವಾರ ಕ್ಷಮೆ ಕೋರಿದ್ದಾರೆ.

 ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡುವಂತೆ ಶ್ರೀಲಂಕಾದ ಹೈ ಕಮಿಷನರ್‌ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಮನ್ಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ  ಅವರು ಸಚಿವಾಲಯದ ಮುಂದೆ ಹಾಜರಾಗಿ  ಕ್ಷಮೆ ಯಾಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.